Get Mystery Box with random crypto!

ರಾಜ್ಯದಲ್ಲಿ ಮತ್ತೆ ಸಾವಿನ ಸಂಖ್ಯೆ ಏರಿಕೆ, ಇಂದು 476 ಮಂದಿ ಬಲಿ, 38603 | Kannada News Daily

ರಾಜ್ಯದಲ್ಲಿ ಮತ್ತೆ ಸಾವಿನ ಸಂಖ್ಯೆ ಏರಿಕೆ, ಇಂದು 476 ಮಂದಿ ಬಲಿ, 38603 ಹೊಸ ಕೇಸ್..!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಮಹಾಮಾರಿಗೆ ಇಂದು ರಾಜ್ಯದಲ್ಲಿ 476 ಜೀವಗಳು ಬಲಿಯಾಗಿವೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 38603 ಹೊಸ ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2242065 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 22313 ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ ಕೊರೋನಾ ಸ್ಪೋಟ ಮುಂದುವರೆದಿದ್ದು 13338 ಜನರಿಗೆ ಕೊರೋನಾ ತಗುಲಿದೆ, ನಗರದಲ್ಲಿ ಇಂದು 239 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 1064396 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 9722 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

View full article