ಕೊರೊನಾ ಆತಂಕದ ಮಧ್ಯೆ ಮೆಟ್ರೊ ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಬೆಂಗಳೂರು, ಮೇ 25: ಕೊರೊನಾ ಆತಂಕದ ಮಧ್ಯೆ ಮೆಟ್ರೋ ಪ್ರಯಾಣಿಕರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ ಕೊಟ್ಟಿದ್ದಾರೆ. ನಮ್ಮ ಮೆಟ್ರೊ 2ನೇ ಹಂತದ ರೀಚ್ 2 ಮೈಸೂರು ರಸ್ತೆ ವಿಸ್ತರಿತ ಮೆಟ್ರೋ ಮಾರ್ಗವನ್ನು ಮಂಗಳವಾರ ಮುಖ್ಯಮಂತ್ರಿ ಯಡಿಯೂರಪ್ಪ ಪರಿಶೀಲನೆ ನಡೆಸಿದ್ದು, ನೂತನ ಮೆಟ್ರೋ ಮಾರ್ಗದ ಕುರಿತು ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಇದೇ ಜುಲೈನಲ್ಲಿ ಈ ಮೆಟ್ರೋ ಮಾರ್ಗ ಆರಂಭವಾಗುವುದಾಗಿ ತಿಳಿಸಿದ್ದಾರೆ. ನಾಯಂಡಹಳ್ಳಿಯಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ ಸಂಚರಿಸಿ ಮೆಟ್ರೋ ಮಾರ್ಗ, ನಿಲ್ದಾಣಗಳಲ್ಲಿನ ಸೌಲಭ್ಯಗಳನ್ನು ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, "ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ರೀಚ್ 2ರ ವಿಸ್ತರಣಾ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಪೂರ್ವಭಾವಿಯಾಗಿ ನಾನು ಇಂದು ಈ ಮಾರ್ಗದ ಪರಿವೀಕ್ಷಣೆ ನಡೆಸಿದ್ದೇನೆ.
View full article