ಉಳ್ಳಾಲ: 200 ಕೆಜಿ ಗಾಂಜಾದೊಂದಿಗೆ ನಾಲ್ವರು ಆರೋಪಿಗಳ ಬಂಧನ ಮಂಗಳೂರು, ಮೇ 26: ಕೇರಳ ಹಾಗೂ ಕರ್ನಾಟಕ ವಿವಿಧ ಕಡೆ ಪೂರೈಸಲು ಸಾಗಿಸಲಾಗುತ್ತಿದ್ದ ಸುಮಾರು 200 ಕೆಜಿ ಗಾಂಜಾದೊಂದಿಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡಿನ ಮುಹಮ್ಮದ್ ಫಾರೂಕ್ (24), ಕುಶಾಲನಗರದ ಸಯ್ಯದ್ ಮುಹಮ್ಮದ್ (31), ಮಂಗಳೂರು ಮುಡಿಪುವಿನ ಮುಹಮ್ಮದ್ ಅನ್ಸಾರ್ (23), ಮಂಜೇಶ್ವರದ ಮೊಯ್ದಿನ್ ನವಾಝ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 2 ವಾಹನ, 3 ತಲವಾರು, 1 ಚಾಕು, 4 ಮೊಬೈಲ್, 1 ವೈಫೈ ಸೆಟ್ಗಳನ್ನು ಸ್ವಾಧೀನಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮೂಡಬಿದ್ರೆ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣದ ಆರೋಪಿಗಳ ಪತ್ತೆ ಕಾರ್ಯದ ವೇಳೆ ಆರೋಪಿಗಳು ಸಾಕಷ್ಟು ಮಂದಿ ಕೇರಳದ ಕಾಸರಗೋಡು ಹಾಗೂ ಮಂಜೇಶ್ವರದವರೆಂದು ತನಿಖೆಯಿಂದ ತಿಳಿದು ಬಂದಿತ್ತು.
View full article