ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಶಂಕಿತರ ಜಾಮೀನು ಅರ್ಜಿಗೆ ಎಸ್ ಐಟಿ ಆಕ್ಷೇಪ ಬೆಂಗಳೂರು, ಮೇ. 29: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ಬ್ಲಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಶಂಕಿತ ಆರೋಪಿಗಳಾದ ಶ್ರವಣ್ ಮತ್ತು ನರೇಶ್ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಅಧಿಕಾರಿಗಳು ಪೂರ್ವ ಸಿದ್ಧತೆ ನಡೆಸಿದ್ದಾರೆ. ತಾಂತ್ರಿಕ ಕಾರಣದಿಂದಾಗಿ ಶನಿವಾರ ಸಲ್ಲಿಸಬೇಕಿದ್ದ ಆಕ್ಷೇಪಣೆ ಅರ್ಜಿಯನ್ನು ಸೋಮವಾರ ಸಲ್ಲಿಸಲು ಎಸ್ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಎಸ್ಐಟಿ ತನಿಖೆಯಲ್ಲಿ ಹನಿಟ್ರ್ಯಾಫ್ ಗೆ ಸಂಬಂಧಿಸಿದಂತೆ ಎಸ್ಐಟಿ ಕಲೆಹಾಕಿರುವ ಸಿಸಿಟಿವಿ ದೃಶ್ಯಗಳು, ದಾಖಲೆಗಳನ್ನು ಆಧರಿಸಿ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಅಶ್ಲೀಲ ಸಿಡಿ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬ್ಲಾಕ್ ಮೇಲ್ ದೂರು ದಾಖಲಿಸಿದ್ದರು.
View full article