ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಪ್ರಯಾಣಿಕರಿಗೆ ಸಿಹಿ ಸುದ್ದಿ ಬೆಂಗಳೂರು, ಜೂನ್ 25: ಕೊರೊನಾ ಸೋಂಕು ಹೆಚ್ಚಳದಿಂದ ರಾಜ್ಯದಲ್ಲಿ ಸಾರಿಗೆ ಸಂಚಾರವನ್ನು ಬಂದ್ ಮಾಡಲಾಗಿತ್ತು. ಸೋಂಕು ಕಡಿಮೆಯಾದ ಕಾರಣ ಹಂತಹಂತವಾಗಿ ಅನ್ಲಾಕ್ ಮಾಡಿದಾಗ ಕೆಲವು ಜಿಲ್ಲೆಗಳಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೂ, ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಿದ್ದ ಕಾರಣ ಬಸ್ ಓಡಿಸುವಂತಿರಲಿಲ್ಲ. ಶನಿವಾರ (ಜೂ.26)ದಿಂದ ವಾರಾಂತ್ಯ ವೇಳೆಯೂ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಓಡಾಡಲಿದ್ದು, ಇದರಿಂದ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ವಾರಾಂತ್ಯ ಕರ್ಫ್ಯೂ: ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ ಶೇ.30 ಕಡಿತ ಈಗಾಗಲೇ ದಿನದ 24 ಗಂಟೆಯೂ ಕೆಎಸ್ಆರ್ಟಿಸಿ ಬಸ್ ಕಾರ್ಯಚರಣೆ ನಡೆಸುತ್ತಿದ್ದು, ಬೆಳಿಗ್ಗೆ 6ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ಬಿಎಂಟಿಸಿ ಬಸ್ ಕಾರ್ಯಚರಣೆ ಇತ್ತು.ಕೋವಿಡ್ ಕುರಿತ ಎಲ್ಲಾ ಲೇಟೆಸ್ಟ್ ಅಪ್ಡೇಟ್ಸ್ ಓದಿ
View full article