2021-05-23 10:18:18
ಆರೋಗ್ಯ ಎಮರ್ಜೆನ್ಸಿಯ ವೇಳೆ ರಾಜಕಾರಣಿಗಳು ದೇವೇಗೌಡರಿಂದ ಕಲಿಯಬೇಕಾದ ಪಾಠ ರಾಜ್ಯ ರಾಜಕೀಯದಲ್ಲಿ ಒಂದು ಮಾತಿದೆ. ಎಲ್ಲಿ, ಯಾವಾಗ, ಹೇಗೆ ರಾಜಕೀಯ ಮಾಡಬೇಕು, ಸಮಯ ಸಂದರ್ಭದಲ್ಲಿ ಹೇಗೆ ಪಕ್ಷಾತೀತವಾಗಿ ದೇಶದ ಪರವಾಗಿ ನಿಲ್ಲಬೇಕು ಎನ್ನುವುದನ್ನು ಜೆಡಿಎಸ್ ವರಿಷ್ಠ ದೇವೇಗೌಡ್ರಿಂದ ಕಲಿಯಬೇಕು ಎಂದು. ಕೇಂದ್ರದಲ್ಲಿ ಸತತವಾಗಿ ಎರಡು ಅವಧಿಯಲ್ಲಿ ಬಿಜೆಪಿ ನೇತೃತ್ವದ ಸರಕಾರವಿದ್ದರೂ, ಯಾವ ಸಂದರ್ಭದಲ್ಲಿ ಮೋದಿ ಸರಕಾರವನ್ನು ವಿರೋಧಿಸಬೇಕು, ಯಾವ ಸಂದರ್ಭದಲ್ಲಿ ತಮ್ಮ ಆಳವಾದ ಅನುಭವದ ಸಲಹೆಯನ್ನು ನೀಡಬೇಕು ಎನ್ನುವುದನ್ನು ಗೌಡ್ರಿಗಿಂತ ಚೆನ್ನಾಗಿ ಹಾಲೀ ರಾಜಕೀಯದಲ್ಲಿ ಇನ್ನೊಬ್ಬರಿಲ್ಲ ಎನ್ನಬಹುದು. 224 ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಒದಗಿಸಿದ ಪ್ರಾಣವಾಯು ಎಷ್ಟು? ಈಗಿನ ಕೊರೊನಾ ಎರಡನೇ ಅಲೆಯಂತಹ ಆರೋಗ್ಯ ತುರ್ತು ಪರಿಸ್ಥಿತಿಯ ವೇಳೆ ಜೆಡಿಎಸ್, ಅದರಲ್ಲೂ ಪ್ರಮುಖವಾಗಿ ದೇವೇಗೌಡ್ರು ತೋರುತ್ತಿರುವ ಮುತ್ಸದ್ದಿತನ ಪ್ರಶಂಸೆಗೊಳಗಾಗಿದೆ.ಕೋವಿಡ್ ಕುರಿತ ಎಲ್ಲಾ ಲೇಟೆಸ್ಟ್ ಅಪ್ಡೇಟ್ಸ್ ಓದಿ
View full article
11 views07:18