2021-05-11 13:18:12
ರಾಜ್ಯದಲ್ಲಿ ಹೊಸ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ: ಇದೇನಾ ಕಾರಣ? ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿರುವ ಅಂಕಿಅಂಶದ ಪ್ರಕಾರ, ಕಳೆದ ಒಂದು ವಾರದಿಂದ ಹೊಸ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯುತ್ತಿದೆ. ಜೊತೆಗೆ, ಆಸ್ಪತ್ರೆಯಿಂದ ಬಿಡುಗಡೆಗೊಳ್ಳುತ್ತಿರುವ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಾಣುತ್ತಿದೆ. ಇಂದು ಪರೀಕ್ಷೆ ಮಾಡಿದ ಕೋವಿಡ್ ವರದಿಯನ್ನು ಆರೋಗ್ಯ ಇಲಾಖೆ ಅಂದೇ ಕೌಂಟಿಗೆ ತೆಗೆದುಕೊಳ್ಳುವುದಿಲ್ಲ ಎನ್ನುವುದು ಗೊತ್ತಿರುವ ವಿಚಾರ. ಏಪ್ರಿಲ್ 27ರಿಂದ ಕರ್ನಾಟಕ ಸರಕಾರ ಜನತಾ ಕರ್ಫ್ಯೂ ಘೋಷಣೆ ಮಾಡಿತ್ತು. ಇದಾದ ನಂತರ ಮೇ ಹತ್ತರಿಂದ ಲಾಕ್ ಡೌನ್ ಹೇರಿತ್ತು. ಕರ್ನಾಟಕದ ಕೋವಿಡ್ ಪ್ರಕರಣ ಇಳಿಕೆ, ಪರೀಕ್ಷೆ ಸಂಖ್ಯೆಯೂ ಕಡಿಮೆ ಹಾಗಾಗಿ, ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಇರುವುದರಿಂದ ಸ್ವಾಭಾವಿಕವಾಗಿ ಜನರು ಕೋವಿಡ್ ಟೆಸ್ಟ್ ಮಾಡಿಸಲು ಹೊರಗೆ ಹೋಗಲು ಸಾಧ್ಯವಾಗುವುದಿಲ್ಲ ಎನ್ನುವುದು ಒಂದು ಕಡೆಯಾದರೆ, ಲಸಿಕೆ ತೆಗೆದುಕೊಂಡು ಟೆಸ್ಟಿಂಗ್ ಹೋದವರ ಸಂಖ್ಯೆಯೂ ಇರಬಹುದು.
View full article
52 views10:18