2021-06-24 19:18:10
ಶಿಕ್ಷಕರಿಗೆ ಬಿಗ್ ಶಾಕ್ : 'ಕಾನೂನು ಬಾಹಿರವಾಗಿ ನಿಯೋಜನೆ'ಗೊಂಡ ಶಿಕ್ಷಕರು ಕೂಡಲೇ ಮೂಲ ಶಾಲೆಗೆ ಕರ್ತವ್ಯಕ್ಕೆ ಹಾಜರಾಗಿ - 'ಶಿಕ್ಷಣ ಇಲಾಖೆ' ಆದೇಶ ಬೆಂಗಳೂರು : ಕಾನೂನು ಬಾಹಿರವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ನಿಯೋಜಿತ ಶಿಕ್ಷಕರು, ಕೂಡಲೇ ಮೂಲ ಶಾಲೆಗಳಲ್ಲಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಖಡಕ್ ಆದೇಶಿದೆ. Big Breaking News : ಟ್ವಿಟ್ಟರ್ ಎಂಡಿ ಮನೀಶ್ ಮಹೇಶ್ವರಿ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿ ಹೈಕೋರ್ಟ್ ಸೂಚನೆ ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ(ಆಡಳಿತ)ರಾದಂತ ಡಾ.ರೂಪಶ್ರೀ, ಬೆಂಗಳೂರು ಮತ್ತು ಮೈಸೂರು ವಿಭಾಗದ ಎಲ್ಲಾ ಉಪ ನಿರ್ದೇಶಕರುಗಳಿಗೆ, ಬೆಂಗಳೂರು ಮತ್ತು ಮೈಸೂರು ವಿಭಾಗದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಉಪ ನಿರ್ದೇಶರುಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಕ್ಕಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸದೇ, ನಿಯಮಬಾಹಿರವಾಗಿ ಶಿಕ್ಷಕರನ್ನು ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ, ನಿಯೋಜನೆ ಮಾಡಿರುವುದು ಕಂಡು ಬಂದಿದೆ.
View full article
38 views16:18