Get Mystery Box with random crypto!

ಗಣರಾಜ್ಯೋತ್ಸದಲ್ಲಿ ಕರ್ನಾಟಕದ ಸ್ತಬ್ಧಚಿತ್ರ ತಿರಸ್ಕಾರ ದೆಹಲಿಯ ರಾಜಪಥದಲ | Karnataka state police.

ಗಣರಾಜ್ಯೋತ್ಸದಲ್ಲಿ ಕರ್ನಾಟಕದ ಸ್ತಬ್ಧಚಿತ್ರ ತಿರಸ್ಕಾರ

ದೆಹಲಿಯ ರಾಜಪಥದಲ್ಲಿ ಜನವರಿ 26ರಂದು ನಡೆಯಲಿರುವ ಗಣತಂತ್ರ ದಿನದ ಪರೇಡ್‌ (Republic Day Parade) ನಲ್ಲಿ ಈ ಸಲ ಕರ್ನಾಟಕದ ಸ್ತಬ್ಧಚಿತ್ರ (Karnataka Tableau) ಇರಲ್ಲ. ಕರ್ನಾಟಕ ಕೊಟ್ಟಿದ್ದ ನಾಲ್ಕೂ ಥೀಮ್‌ಗಳನ್ನು ಆಯ್ಕೆ ಸಮಿತಿ ತಿರಸ್ಕರಿಸಿದೆ.

ಸರ್ಕಾರದ ಮೂಲಗಳನ್ನು ಉಲ್ಲೇಖಿಸಿರುವ ಮಾಧ್ಯಮ ವರದಿ ಪ್ರಕಾರ, ಕಳೆದ 13 ವರ್ಷಗಳ ಅವಧಿಯಲ್ಲಿ ಇದೇ ಮೊದಲ ಸಲ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಕೈ ತಪ್ಪಿದೆ. ಕೇರಳ, ತಮಿಳುನಾಡು ಸೇರಿ 13 ರಾಜ್ಯಗಳನ್ನು ಈ ಸಲ ಸ್ತಬ್ಧಚಿತ್ರಕ್ಕೆ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ಕೇರಳಕ್ಕೆ ಅವಕಾಶ ಮಿಸ್‌ ಆಗಿತ್ತು.

ರಾಜ್ಯದಿಂದ ಈ ಬಾರಿ ಒಟ್ಟು ನಾಲ್ಕು ಸ್ತಬ್ಧ ಚಿತ್ರಗಳನ್ನು ಆಯ್ಕೆ ಮಾಡಲಾಗಿತ್ತು. ಸಿರಿಧಾನ್ಯ, ನಾರಿಶಕ್ತಿ, ಸಾಲು ಮರದ ತಿಮ್ಮಕ್ಕ,ಸೂಲಗಿತ್ತಿ ನರಸಮ್ಮ ಸೇರಿದಂತೆ ಒಟ್ಟು ನಾಲ್ಕು ಸ್ತಬ್ಧ ಚಿತ್ರಗಳನ್ನು ಅಂತಿಮಗೊಳಿಸಿ ಆಯ್ಕೆ ಸಮಿತಿಗೆ ಕಳುಹಿಸಲಾಗಿತ್ತು